Friday, March 21, 2014

" ಕಾವ್ಯೋದ್ಭವ "

ನಾ ಯೋಚಿಸಿ ಯೋಚಿಸಿ ಸಾಕಾಗಿ 
ಆಲೋಚನೆಗಳಲ್ಲಿ ಮುಳುಗಿದರೂ....
ದಿನವಿಡೀ ತೂಕಡಿಸಿ ಕೂತರೂ...
ಹತ್ತಿರ ಸುಳಿಯದು, ನೆನಪಿಗೆ ನಿಲುಕದು
ಒಮ್ಮೊಮ್ಮೆ ಏನೂ... ಹೊಳೆಯುವುದೇ ಇಲ್ಲ;
ಪುಟಗಟ್ಟಲೆ ಬರೆಯಬೇಕೆಂಬ ಹಂಬಲಕೆ
ನಾ ಬಿಡಬೇಕಷ್ಟೇ... ನಿಟ್ಟುಸಿರಿನ ಎಳ್ಳು- ನೀರು
ರಾತ್ರಿಯಿಡೀ ನಿದ್ದೆಯಿಲ್ಲದೆ ಅಡ್ಡಾದಿಡ್ಡಿ ಒದ್ದಾಡಿದರೂ...
ಆ ಅಗಾಧವಾದ ಆಳಕ್ಕೆ ಹೊಕ್ಕಂತೆಲ್ಲಾ....
ಅಂಧಕಾರದ ಆರ್ಭಟವೇ .... ಹೆಚ್ಚು
ಮುಗ್ಗರಸಿ ಬಿದ್ದೀನೆಂಬ ಭಯವಿಲ್ಲ,
ಪುಂಖಾನುಪುಂಖವಾಗಿ ಒಮ್ಮಿಂದೊಮ್ಮೆಲೇ
ಮನ ಮಂಥನದಿ ಮಂಥಿಸಿದಷ್ಟೂ....
ಕಾರ್ಕೋಟಕ ಹಾಲಾಹಲ, ಕೋಲಾಹಲದ ಜೊತೆ ಕಾವ್ಯಾಮೃತದ ಉದ್ಭವ ...

ವಿಶ್ವ ಕವನ ದಿನಕ್ಕಾಗಿ ಬರೆದದ್ದು ( World Poetry Day )

1 comment:

  1. ನಮ್ಮಂತಹ ಕವಿಪುಂಗವರ ಪರಪಾಟಲು ಬರೆದುಕೊಟ್ಟಿದ್ದೀರ.

    ReplyDelete